ಚಿಕ್ಕಬಳ್ಳಾಪುರ/ಗುಡಿಬಂಡೆ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚಿಕ್ಕಬಳ್ಳಾಪುರ ರಸ್ತೆಯ ರೇಣುಮಾಕಲಹಳ್ಳಿಯ ಆಂಜನೇಯ ದೇವಾಲಯದ ಬಳಿ ಭಾನುವಾರ ರಾತ್ರಿ ನಡೆದಿದೆ.
ಸುಮಾರು 22 ರಿಂದ 25 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಹಳದಿ ಮತ್ತು ಕಪ್ಪು ಬಣ್ಣದ ಚೌಕಲಿ ಅಂಗಿ, ಖಾಕಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ ಎಂದು ಗುಡಿಬಂಡೆ ಪೊಲೀಸರು ತಿಳಿಸಿದ್ದಾರೆ. ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.