ಬೆಂಗಳೂರು: ಜೂನ್.30ರಂದು ನಡೆಯಲಿರುವಂತ ಮೂರು ವಿಧಾನಪರಿಷತ್ತಿನ ಸ್ಥಾನಗಳ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಅಭ್ಯರ್ಥಿ ಗಳನ್ನು ಘೋಷಣೆ ಮಾಡಿದೆ.
ಈ ಕುರಿತಂತೆ ಎಐಸಿಸಿಯಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ದಿಂದ ಅಭ್ಯರ್ಥಿಗಳನ್ನಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್ ಹಾಗೂ ಎನ್ ಎಸ್ ಬೋಸೆರಾಜು ಅವರ ಹೆಸರನ್ನು ಘೋಷಿಸಿದೆ.
ನಾಳೆ ವಿಧಾನ ಪರಿಷತ್ ಉಪ ಚುನಾವಣೆಗೆ ಕೊನೆಯ ದಿನವಾದ ಕಾರಣ ಕಾಂಗ್ರೆಸ್ ಪಕ್ಷದಿಂದ ಈ ಮೂವರು ಅಭ್ಯರ್ಥಿಗಳು ನಾಮ ಪತ್ರವನ್ನು ಸಲ್ಲಿಸಿದ್ದಾರೆ.
ಅಂದಹಾಗೇ ಕೇಂದ್ರ ಚುನಾವಣಾ ಆಯೋಗದಿಂದ ವಿಧಾನಸಭಾ ಮೂರು ಸ್ಥಾನಗಳಿಗೆ ಉಪಚುನಾವಣೆ ಸಂಬಂಧ ಅಧಿಸೂಚನೆಯನ್ನು ಹೊರಡಿಸಿತ್ತು. ಶಾಸಕ ಲಕ್ಷ್ಮಣ್ ಸವದಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್.14ಕ್ಕೆ, ಬಾಬು ರಾವ್ ಚಿಂಚನಸೂರ್ ಜೂನ್.17ರಂದು ಹಾಗೂ ಆರ್ ಶಂಕರ್ ಅವರ ಅಧಿಕಾರಾವಧಿ ಜೂನ್.30ರಂದು ಕೊನೆಗೊಳ್ಳಲಿದೆ ಎಂದಿತ್ತು.
ಮೂವರು ಕರ್ನಾಟಕ ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಮೂರು ಸ್ಥಾನಗಳಿಗೆ ಜೂನ್.30 ರಂದು ಉಪ ಚುನಾವಣೆ ನಡೆಸುವು ದಾಗಿ ತಿಳಿಸಿತ್ತು.
ಇನ್ನೂ ಜೂನ್.13ರಂದು ಅಧಿ ಸೂಚನೆ ಯನ್ನು ಹೊರಡಿಸಲಾಗಿತ್ತು. ಜೂನ್.20ರ ನಾಳೆ ನಾಮಪತ್ರ ಗಳನ್ನು ಸಲ್ಲಿಸಲು ಕೊನೆಯ ದಿನ ವಾಗಿದೆ. ಜೂನ್.21ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್.23ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ವಾಗಿದೆ. ಜೂನ್.30ರಂದು ಮತ ದಾನವನ್ನು ನಿಗದಿ ಪಡಿಸಲಾಗಿದೆ. ಜೂನ್.30ರಂದು ಬೆಳಿಗ್ಗೆ 9 ರಿಂದ 4 ಗಂಟೆಯವರೆಗೆ ನಡೆಸಲಾಗುತ್ತದೆ. ಸಂಜೆ 5 ಗಂಟೆಗೆ ಮತಗಳ ಏಣಿಕೆ ಕಾರ್ಯ ನಡೆದು, ಫಲಿತಾಂಶ ಅಂದೇ ಘೋಷಣೆಯಾಗಲಿದೆ.