ಮನೆಜಿಲ್ಲೆ ಸುದ್ದಿಪೌರನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಡಾ.ಪಿ.ಪಾಂಡುಸಿಂಧೆ ಅವಿರೋಧ ಆಯ್ಕೆ

ಪೌರನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಡಾ.ಪಿ.ಪಾಂಡುಸಿಂಧೆ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ :ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡು ಸಿಂಧೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್ ಆದೇಶ ದಂತೆ ಆಯ್ಕೆ ಪ್ರಕ್ರಿಯೆ ನಡೆದಿದೆ.ನಗರದ ಡಾ.ರಾಜ ಕುಮಾರ್ ಕಲಾಮಂದಿರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸರ್ವಾನು ಮತದಿಂದ ಜಿಲ್ಲಾಧ್ಯಕ್ಷ ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ನೂತನಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಡಾ.ಪಿ.ಪಾಂಡುಸಿಂಧೆ ಮಾತನಾಡಿ ಪೌರಕಾರ್ಮಿಕರು ಪ್ರತಿನಿತ್ಯವೂ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸ್ಪಂದಿಸುತ್ತೇನೆ.ಸರ್ಕಾರದಿಂದ ದೊರೆಯುವ ಪ್ರತಿಯೊಂದು ಸೌಲಭ್ಯ ಗಳನ್ನು ಪ್ರತಿಯೊಬ್ಬ ಪೌರನೌಕರರಿಗೂ ತಲುಪುವಂತೆ ನೋಡಿಕೊಳ್ಳಲಾಗಿವುದು. ನೌಕರರು ಸಮಸ್ಯೆಗಳನ್ನ ತಿಳಿಸಿದರೆ ಸೂಕ್ತ‌ಕ್ರಮ ವಹಿಸಲಾಗುವುದು ಎಂದರು.

ನೂತನ ಪದಾಧಿಕಾರಿಗಳು: ಜಿಲ್ಲಾ ಅಧ್ಯಕ್ಷ :ಡಾ.ಪಿ.ಪಾಂಡುಸಿಂಧೆ, ಲೆಕ್ಕಾಧಿಕಾರಿ ನಗರಸಭೆ, ದೊಡ್ಡಬಳ್ಳಾಪುರ. ಕಾರ್ಯದರ್ಶಿ – ಆರ್.ಐ ಗೋವಿಂದರಾಜು, ನಗರಸಭೆ, ದೊಡ್ಡಬಳ್ಳಾಪುರ. ಉಪಾಧ್ಯಕ್ಷ – ಚಂದ್ರಶೇಖರ್, ನೆಲಮಂಗಲ. ಖಜಾಂಚಿ – ಸಾಹಿದಾ, ಮ್ಯಾನೇಜರ್ ದೊಡ್ಡಬಳ್ಳಾಪುರ. ರಾಜ್ಯ ಪರಿಷತ್ ಸದಸ್ಯ – ಉಮಾಶಂಕರ್, ಬಾಶೆಟ್ಟಿಹಳ್ಳಿ. ನಿರ್ದೇಶಕರಾಗಿ ಜಿಲ್ಲಾ ಯೋಜನಾ ನಿರ್ದೇಶಕರ ಕಚೇರಿಯಿಂದ ವೆಂಕಟೇಶ್, ಸುರೇಶ್,ಹೊಸಕೋಟೆಯ ಮಂಜುನಾಥ(ವಾಟರ್ ಮ್ಯಾನ್) ಶಿವಕುಮಾರ,(ಪೌರಕಾರ್ಮಿಕ), ವಿಜಯಪುರದ ಅಜ್ಮತ್ ಉಲ್ಲಾ,(ಎಲೆಕ್ಟ್ರಿಕಲ್), ಲಾವಣ್ಯ( ಎಸ್ಎಚ್ಐ) ದೇವನಹಳ್ಳಿಯ ಎಂ.ನಾರಾಯಣ ಸ್ವಾಮಿ, ಶ್ರೀದೇವಿ( ಎಸ್ಎಚ್ಐ), ಬಾಶೆಟ್ಟಿಹಳ್ಳಿಯ ಕೀರ್ತಿಲೇಖಾ( ಜೆಎಚ್ಐ), ನೆಲಮಂಗಲದ ಬಿಜಿ ಸುಲೋಚನ( ಎಸ್ಎಚ್ಐ), ಉಮಾ ಶಂಕರ್(ಎಫ್.ಡಿಎ) ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳನ್ನು ತಾಲ್ಲೂಕು ಪೌರಕಾರ್ಮಿಕರ ಘಟಕದಿಂದ ಅಭಿನಂದಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -

Most Popular

Recent Comments