!ತುಮಕೂರು: ಮಾಹಿತಿ ಹಕ್ಕು ಕಾಯ್ದೆ ಯಡಿ ಕೇಳಿದ ದಾಖಲೆಗಳನ್ನು ನೀಡಲು ನಿರ್ಲಕ್ಷ್ಯ ತೋರಿದ ಹಾಗೂ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ತುಮಕೂರು ತಹಸೀಲ್ದಾರ್ ರಾಜೇಶ್ವರಿ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 25 ಸಾವಿರ ರೂ. ದಂಡ ವಿಧಿಸಿದೆ. ಶಿರಾಗೇಟಿನ ಮರಳೇನಹಳ್ಳಿ ಸೋಮ ಶೇಖರ್ ಅವರು ವಂಶವೃಕ್ಷ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದರು. ಮಾಹಿತಿ ಸಿಗದ ಹಿನ್ನೆಲೆ ಯಲ್ಲಿ ಮೇಲ್ಮನವಿ ಸಲ್ಲಿಸಿದರೂ ಫಲಿತಾಂಶ ದೊರಕಲಿಲ್ಲ. ಅಂತಿಮವಾಗಿ ಮಾಹಿತಿ ಆಯೋಗಕ್ಕೆ ದೂರು ನೀಡಿದ ಬಳಿಕವೂ ತಹಸೀಲ್ದಾರ್ ಪ್ರತಿಕ್ರಿಯಿಸದ ಕಾರಣ ದಂಡ ವಿಧಿಸಲಾಗಿದೆ. ದಂಡವನ್ನು ಸಂಬಳದಿಂದ ಕಡಿತ

ಗೊಳಿಸಿ ಜಮೆ ಮಾಡಲು ಹಾಗೂ ಪ್ರಕರಣವನ್ನು ಶೀಘ್ರ ವಿಲೇವಾರಿ ಮಾಡಲು ಸೂಚಿಸಲಾಗಿದೆ.





